ಸಾಕ್ಷರತಾ ಪ್ರಮಾಣ ವಚನ - ಅಂತರಾಷ್ಟ್ರೀಯ ಸಾಕ್ರತಾ ದಿನಾಚರಣೆ...

 



    ಸಾಕ್ಷರತಾ ಕಾರ್ಯಕ್ರಮಗಳು ಕರ್ನಾಟಕವನ್ನು ಸಾಕ್ಷರ. ಸಮೃದ್ಧ. ಸುಸ್ಥಿರ ಮತ್ತು ಅಭಿವೃದ್ಧಿ ನಾಡನ್ನಾಗಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳು ಎಂಬುದನ್ನು ಮನವರಿಕೆ ಮಾಡಿಕೊಂಡಿದ್ದೇನೆ.


    ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರ ಮನೆ ಹಾಗೂ ಮನವನ್ನು ತಲುಪಿ. ಮಹಿಳೆ ಮತ್ತು ಶಿಕ್ಷಣ ವಂಚಿತ ವರ್ಗದವರ ಕಲಿಕೆಗಾಗಿ ಈ ಕಾರ್ಯಕ್ರಮವು ಜನಾಂದೋಲನಗೊಳ್ಳಲು ಕಾಯಾ, ವಾಚಾ, ಮನಸಾ ಪಾಲ್ಗೊಂಡು ಸೇವೆ ಸಲ್ಲಿಸುವ ಸಂಕಲ್ಪ ಮಾಡಿಕೊಂಡಿದ್ದೇನೆ.


    ಅನಕ್ಷರಸ್ಥರೆಲ್ಲರೂ ಅಕ್ಷರ ಕಲಿತು ಸಾಕ್ಷರಸ್ಥರಾಗಿ ಕೌಶಲಾಭಿವೃದ್ಧಿ ಹೊಂದಲು ಹಾಗೂ ಕಲಿಯುತ್ತಿರುವ ಸಮಾಜದ ನಿರ್ಮಾಣಕ್ಕಾಗಿ ನಾನು ಕಲಿತ ಋಣವನ್ನು ಕಲಿಸಿ ತೀರಿಸುತ್ತೇನೆಂದು ಪ್ರಮಾಣೀಕರಿಸುತ್ತೇನೆ.